Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಇನ್ನೊಂದು ಕನಸು ಕಂಡು ಅದನ್ನೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ - ಇನ್ನೊಂದು ಕನಸು ಕಂಡಿದ್ದೇನೆ; ಅದರಲ್ಲಿ ಸೂರ್ಯಚಂದ್ರರೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:9
19 ತಿಳಿವುಗಳ ಹೋಲಿಕೆ  

ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.


ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.


ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.


ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು,


ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.


ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.


ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.


ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.


ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು