Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:7
11 ತಿಳಿವುಗಳ ಹೋಲಿಕೆ  

ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.


ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.


ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ “ತಾಮಾರ್” ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು.


“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.


ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು