Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಕೈಗೂಡಿಸಿದ್ದರಿಂದ ಅವನ ವಶದಲ್ಲಿದ್ದ ಯಾವದೊಂದರ ವಿಷಯದಲ್ಲಿಯೂ ಸೆರೆಮನೆಯ ಯಜಮಾನನು ಏನೂ ಚಿಂತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:23
10 ತಿಳಿವುಗಳ ಹೋಲಿಕೆ  

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.


ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು