Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:7
33 ತಿಳಿವುಗಳ ಹೋಲಿಕೆ  

ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ


“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,


ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.


ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.


ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.


ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.


ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು