Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:8
23 ತಿಳಿವುಗಳ ಹೋಲಿಕೆ  

ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.


ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.


ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.


ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.


ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.


ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು