Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:13
8 ತಿಳಿವುಗಳ ಹೋಲಿಕೆ  

ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.


ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.


ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು