Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:14
9 ತಿಳಿವುಗಳ ಹೋಲಿಕೆ  

ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.


“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.


ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,


ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.


ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು