Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:19
17 ತಿಳಿವುಗಳ ಹೋಲಿಕೆ  

ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.


“ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.


ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.


ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.


ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.


ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು