ಆದಿಕಾಂಡ 41:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
15 ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
15 ಆಗ ಫರೋಹನು ಯೋಸೇಫನಿಗೆ - ನಾನು ಒಂದು ಕನಸು ಕಂಡಿದ್ದೇನೆ; ಅದರ ಅರ್ಥವನ್ನು ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲವನೆಂದು ವರ್ತಮಾನ ಕೇಳಿದ್ದೇನೆ ಎಂದು ಹೇಳಲು
15 ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
15 ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.
ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.