Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಫರೋಹನಿಗೆ ಕನಸು ಎರಡು ವಿಧವಾಗಿ ಬಿದ್ದದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನೆಂಬದಾಗಿ ತಿಳುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:32
18 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.


ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.


ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.


ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.


ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು