Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:52
21 ತಿಳಿವುಗಳ ಹೋಲಿಕೆ  

ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.


ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.


ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.


ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ


ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.


ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.


ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.


ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.


ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು.


ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು