Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:13
26 ತಿಳಿವುಗಳ ಹೋಲಿಕೆ  

ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.


ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.


ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.


ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು.


“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”


ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.


ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.


ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.


ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.


ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.


ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.


ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು