Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು ಹೌದೋ ಅಲ್ಲವೋ ಗೊತ್ತಾಗುವದಕ್ಕಾಗಿ ನಿಮ್ಮ ತಮ್ಮನು ಬರಬೇಕು; ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನೀವು ಹೇಳುತ್ತಿರುವುದು ಸತ್ಯವಾಗಿದ್ದರೆ ನಿಮ್ಮ ಚಿಕ್ಕ ತಮ್ಮನು ಇಲ್ಲಿಗೆ ಬರಬೇಕು; ಇಲ್ಲವಾದರೆ ಫರೋಹನ ಜೀವದಾಣೆ, ಅಲ್ಲಿಯವರೆಗೂ ನೀವು ಈ ಸ್ಥಳದಿಂದ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನಿಮ್ಮನ್ನು ನಾನು ಪರೀಕ್ಷಿಸುತ್ತೇನೆ. ಹೇಗೆಂದರೆ, ನಿಮ್ಮ ಚಿಕ್ಕ ಸಹೋದರನು ಇಲ್ಲಿಗೆ ಬಂದ ಹೊರತು, ಫರೋಹನ ಜೀವದಾಣೆ ನೀವು ಇಲ್ಲಿಂದ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:15
19 ತಿಳಿವುಗಳ ಹೋಲಿಕೆ  

ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.


ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.


ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.


ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.


ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.


ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.


ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.


ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು