Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:2
11 ತಿಳಿವುಗಳ ಹೋಲಿಕೆ  

ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.


ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.


ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.


ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.


ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.


ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.


ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.


ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು