Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:22
19 ತಿಳಿವುಗಳ ಹೋಲಿಕೆ  

ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.


ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.


ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.


ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.


ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.


ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು