Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:28
14 ತಿಳಿವುಗಳ ಹೋಲಿಕೆ  

ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.


ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.


ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು