Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:5
7 ತಿಳಿವುಗಳ ಹೋಲಿಕೆ  

“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.


ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು