Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:6
19 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.


“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.


ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.


ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು