Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:11
37 ತಿಳಿವುಗಳ ಹೋಲಿಕೆ  

ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು


ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.


ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.


ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.


ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.


ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.


ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.


ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.


ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.


ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.


ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು.


ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.


ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.


ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.


“ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು