Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:12
12 ತಿಳಿವುಗಳ ಹೋಲಿಕೆ  

ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.


ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.


ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.


ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.


ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.


ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು