Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:18
20 ತಿಳಿವುಗಳ ಹೋಲಿಕೆ  

ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.


ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.


ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.


ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ.


ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.


ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.


“ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,


ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.


ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.


ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.


ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.


ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು