Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಅವನು - ಸಮಾಧಾನವಾಗಿರ್ರಿ. ನೀವೇನೂ ಹೆದರಬೇಡಿರಿ; ನಿಮ್ಮ ತಂದೆಗೂ ನಿಮಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿಯೇ ನಿಕ್ಷೇಪ ಸಿಕ್ಕುವಂತೆ ಅನುಗ್ರಹಿಸಿದ್ದಾನೆ; ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:23
17 ತಿಳಿವುಗಳ ಹೋಲಿಕೆ  

ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.


ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.


ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.


ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.


ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;


ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.


ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು.


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು