Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:27
12 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.


ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.


ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.


ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.


ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.


ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.


ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.


ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.


ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು.


ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.


ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು