Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:3
13 ತಿಳಿವುಗಳ ಹೋಲಿಕೆ  

ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.


ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ.


ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.


ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.


ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.


ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.


ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.


ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.


ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.


ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು