Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಯೆಹೂದನು ತನ್ನ ತಂದೆ ಯಕೋಬನಿಗೆ, “ನೀವು, ನಾವು ಮತ್ತು ನಮ್ಮ ಮಕ್ಕಳು, ಎಲ್ಲರೂ ಸಾಯದೆ ಉಳಿಯಬೇಕಾದರೆ ಆ ಹುಡುಗನನ್ನು ನನ್ನ ಜೊತೆ ಕಳಿಸಿಕೊಡಿ, ನಾವು ಇದೀಗಲೆ ಹೊರಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಮೇಲೆ ಯೆಹೂದನು ತನ್ನ ತಂದೆಯಾದ ಇಸ್ರೇಲನಿಗೆ, “ನನ್ನೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡು. ನಾನು ಅವನನ್ನು ನೋಡಿಕೊಳ್ಳುವೆನು. ನಾವು ಈಜಿಪ್ಟಿಗೆ ಹೋಗಿ ಆಹಾರವನ್ನು ತರಬೇಕು. ಇಲ್ಲವಾದರೆ ನಾವೂ ಸಾಯುವೆವು, ನಮ್ಮ ಮಕ್ಕಳೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:8
14 ತಿಳಿವುಗಳ ಹೋಲಿಕೆ  

“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.


“ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.


ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.


ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.


ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.


ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.


ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.


ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು