Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:17
10 ತಿಳಿವುಗಳ ಹೋಲಿಕೆ  

ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.


ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.


ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು