Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:18
19 ತಿಳಿವುಗಳ ಹೋಲಿಕೆ  

ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?


ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.


ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.


ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.


ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.


“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.


ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.


ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?


ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.


ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.


ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.


ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.


ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.


ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು