Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋಸೇಫನ ಸಹೋದರರು ಅವನ ಬಳಿಗೆ ಬಂದಿರುವುದು ತಿಳಿದಾಗ ಫರೋಹನಿಗೂ ಅವನ ಮನೆಯವರಿಗೂ ತುಂಬ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:16
15 ತಿಳಿವುಗಳ ಹೋಲಿಕೆ  

ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.


ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.


ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.


ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.


ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ


ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.


ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.


“ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.


ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.


“ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.


ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.


ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.


ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,


ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು