Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:26
17 ತಿಳಿವುಗಳ ಹೋಲಿಕೆ  

ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,


“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.


ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.


“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.


ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.


ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.


ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.


ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,


ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.


ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು