Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತದೇಶದಲ್ಲಿಯೂ ಕಾನಾನ್‍ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನೂ ಸೆಳಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:14
8 ತಿಳಿವುಗಳ ಹೋಲಿಕೆ  

ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.


ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.


ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.


ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.


ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು