Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:26
11 ತಿಳಿವುಗಳ ಹೋಲಿಕೆ  

ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.


ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.


ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.


ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.


“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.


“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.


ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.


ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.


ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು