Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:7
18 ತಿಳಿವುಗಳ ಹೋಲಿಕೆ  

ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.


ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.


ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.


ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.


ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.


ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.


ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು.


ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.


ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು