Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:10
58 ತಿಳಿವುಗಳ ಹೋಲಿಕೆ  

ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.


ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”


ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.


ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,


ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.


ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.


ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.


ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.


ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”


ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು


ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.


ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.


ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?


ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು