Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:28
16 ತಿಳಿವುಗಳ ಹೋಲಿಕೆ  

ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.


ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.


ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.


ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು