Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:4
11 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


“ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”


ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು