Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:9
11 ತಿಳಿವುಗಳ ಹೋಲಿಕೆ  

ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.


ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.


ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.


ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.


ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು