Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದೇಶದ ಜನರಾಗಿದ್ದ ಕಾನಾನ್ಯರು ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ - ಐಗುಪ್ತ್ಯರಿಗೆ ಬಂದಿರುವ ಈ ಶೋಕವು ಬಹುವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಆಬೇಲ್‍ಮಿಚ್ರಯೀಮ್ ಎಂದು ಹೆಸರಾಯಿತು. ಇದು ಯೊರ್ದನ್ ಹೊಳೆಯಿಂದ ಆಚೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವವರನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆ ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:11
10 ತಿಳಿವುಗಳ ಹೋಲಿಕೆ  

ಅಬ್ರಹಾಮನು ಅವನಿಗೆ, “ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು.


ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.


ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.


ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.


ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.


ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು