Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು - ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ಪೂರಾ ಶಿಕ್ಷೆಯನ್ನು ಕೊಟ್ಟಾನು ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ಯೋಸೇಫನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:15
13 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.


ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.


ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,


ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು