Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:17
24 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.


ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.


ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,


ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು