Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:25
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.


ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.


ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.


ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.


ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು