Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-4 ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:2
31 ತಿಳಿವುಗಳ ಹೋಲಿಕೆ  

ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.


ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,


ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.


ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,


ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು


ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.


ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;


ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು.


ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು