Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:23
21 ತಿಳಿವುಗಳ ಹೋಲಿಕೆ  

ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು