Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:1
35 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.


ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.


ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.


ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.


ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.


ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.


ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.


ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.


ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.


ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.


ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು