Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:21
50 ತಿಳಿವುಗಳ ಹೋಲಿಕೆ  

ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”


“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.


ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.


ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.


ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.


ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.


ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ಅವರು ಸರ್ಪದಂತೆ ವಿಷಭರಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು