Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 "ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಇನ್ನೂ ನುಡಿದದ್ದೇನಂದರೆ - ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲದೆ ನೋಹನು, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಕಾನಾನನು ಶೇಮನಿಗೆ ಗುಲಾಮನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:26
15 ತಿಳಿವುಗಳ ಹೋಲಿಕೆ  

ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.


ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.


ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.


ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು