Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಭೂವಿುಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:3
18 ತಿಳಿವುಗಳ ಹೋಲಿಕೆ  

ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.


ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?


ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು