Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ದಮಸ್ಕದ ಲಾಳವಂಡಿಗೆಯನ್ನು ಮುರಿದು ಆವೆನ್ ತಗ್ಗಿನೊಳಗಿಂದ ಸಿಂಹಾಸನಾಸೀನನನ್ನೂ ಬೇತ್ ಎದೆನಿನಿಂದ ರಾಜದಂಡಧಾರಿಯನ್ನೂ ನಿರ್ಮೂಲಮಾಡುವೆನು; ಅರಾಮ್ಯರು ಕೀರಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:5
14 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.


ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.


ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.


“ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು