Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:6
18 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ


ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.


“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.


ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು