Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:4
53 ತಿಳಿವುಗಳ ಹೋಲಿಕೆ  

ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.


ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.


ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು