Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:8
17 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.


ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.


ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.


ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು